ಮಾನ್ವಿ,ಡಿ.1೦- ಪಟ್ಟಣದ ಟಿ.ಎ.ಪಿ.ಎಂ.ಸಿ.ಎಸ್ ಆವರಣದಲ್ಲಿ ಡಿಸೆಂಬರ್ ೧೩ರಂದು ಬೆಳಿಗ್ಗೆ ೧೧ ಗಂಟೆಗೆ ಸಂಕಲ್ಪ ವಿಕಲಚೇತನರ ಒಕ್ಕೂಟ ರಾಯಚೂರು ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆ ಹಮ್ಮಿಕೊಳ್ಳಲಾಗುವುದು ಎಂದು ಒಕ್ಕೂಟದ ಗೌರವಾಧ್ಯಕ್ಷ ದೇಸಾಯಿ ದೊತರಬಂಡಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ವಿಕಲಚೇತನರು ಎದುರಿಸುವ ಸವಾಲುಗಳನ್ನು ಸಮಾಜ ಅರಿತು, ಅವರ ಹಕ್ಕುಗಳು, ಗೌರವ, ಸಮಾನತೆ ಮತ್ತು ಸಬಲೀಕರಣಕ್ಕೆ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಶಿವಕುಮಾರ್ ಚಲ್ಮಲ್ ಅವರು, ಕಾರ್ಯಕ್ರಮಕ್ಕೆ ಕಲ್ಮಠದ ಪೂಜ್ಯ ಶ್ರೀ ಷ. ಬ್ರ. ವಿರೂಪಾಕ್ಷ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಮುಸ್ಲಿಂ ಸಮುದಾಯದ ಧರ್ಮಗುರು ಶ್ರೀ ಸೈಯದ್ ಸಜ್ಜದ್ ಹುಸೇನ್ ಮತವಾಲೆ ಸಾಹೆಬ್ ಹಾಗೂ ಸೇಂಟ್ ಮೇರಿಸ್ ಕ್ಯಾಥೋಲಿಕ್ ಚರ್ಚ್ನ ವಂ? ಫಾದರ್ ವಿನ್ಸೆಂಟ್ ಸುರೇಶ್ ರವರ ದಿವ್ಯ ಸಾನ್ನಿಧ್ಯ ಲಭ್ಯವಿರಲಿದೆ ಎಂದು ಹೇಳಿದರು.
ಮಾನ್ವಿ ಶಾಸಕರಾದ ಜಿ. ಹಂಪಯ್ಯ ನಾಯಕ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಾಹಿತಿಗಳಾದ ದೇವರಾಜ್ ಎಸ್. ಬಪ್ಪೂರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ದೇಸಾಯಿ ದೊತರಬಂಡಿ ವಹಿಸಲಿದ್ದಾರೆ.
ಜಿಲ್ಲೆ ತಾಲೂಕು ಮಟ್ಟದ ರಾಜಕೀಯ ನಾಯಕರು, ಸರ್ಕಾರಿ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಭಾಗವಹಿಸಲಿದ್ದಾರೆ. ಜಿಲ್ಲಾಮಟ್ಟದಲ್ಲಿ ಕಾರ್ಯಕ್ರಮ ಯಶಸ್ವಿಯಾಗಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಬೆಂಬಲಿಸಬೇಕೆAದು ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸಾವಿತ್ರಮ್ಮ, ಮಾನ್ವಿ ತಾಲೂಕು ಅಧ್ಯಕ್ಷರಾದ ಲಕ್ಷ್ಮೀ ಉಟಕನೂರು, ಸಿರವಾರ ತಾಲೂಕು ಅಧ್ಯಕ್ಷರಾದ ಅಮರೇಶ ಪಾಟೀಲ್ ಚಾಗಭಾವಿ, ಚಂದ್ರಶೇಖರ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದ
